ತಂದೆಯ ತಿಥಿ ಕಾರ್ಯದ ದಿನವೇ ಮಗಳ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೆ.ಎಸ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪರಮೇಶ್ವರಿ (42 ) ಮೃತ ದುರ್ದೈವಿ.
ಪರಮೇಶ್ವರಿ ಅವರ ಮನೆಯಲ್ಲಿ ತಂದೆ ಕಾಶಿನಾಥ್ ಅವರ 6ನೇ ವರ್ಷದ ಪುಣ್ಯ ತಿಥಿ ಕಾರ್ಯ ನಡೆಯುತಿತ್ತು. ತಿಥಿ ಕಾರ್ಯಕ್ಕೆ ನಾನ್ ವೆಜ್ ಅಡುಗೆ ಮಾಡಲು ಸಿಲಿಂಡರ್ ತರಿಸಲಾಗಿತ್ತು. ಮನೆ ಚಿಕ್ಕದಾಗಿದ್ದು ಕೋಣೆಯಲ್ಲೇ ಸಿಲಿಂಡರ್ ಇಟ್ಟು ಅಡುಗೆ ಮಾಡಲು ತಯಾರಿ ನಡೆಸಲಾಗುತಿತ್ತು. ಈ ವೇಳೆ ಗ್ಯಾಸ್ ಸೋರಿಕೆಯಾಗಿ ಸ್ಟೌವ್ ಬೆಂಕಿಯಿಂದ ಸ್ಫೋಟಗೊಂಡಿದೆ. ಘಟನೆಯಲ್ಲಿ ಪರಮೇಶ್ವರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇನ್ನು ಮನೆಯಲ್ಲಿದ್ದ ಉಳಿದ ಆರು ಮಂದಿಗೆ ಗಾಯಗಳಾಗಿದ್ದು, ವಿಕ್ಟೋರಿಯಾ ಬರ್ನಿಂಗ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಶಿನಾಥ್ ಪತ್ನಿ ಸೌಭಾಗ್ಯ ( 75) ಅವರ ದೇಹ ಹೆಚ್ಚು ಸುಟ್ಟಿದೆ. ಮಗ ಶರವಣ(43) ಸಂಬಂಧಿ ಪರಮಶಿವಂ , ( 47)ಪರಮಶಿವಂ ಪತ್ನಿ ಭುವನೇಶ್ವರಿ (40) ಮತ್ತೊಬ್ಬ ಸಂಬಂಧಿ ಮಾಲಾ( 60) ಗಂಭೀರ ಗಾಯಗೊಂಡಿದ್ದಾರೆ.
ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.