ಶಿವಮೊಗ್ಗದಲ್ಲಿ ನಡೆದಿರುವ ಯುವಕನ ಹತ್ಯೆಯನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಇದು ಅತ್ಯಂತ ಖಂಡನೀಯವಾಗಿದೆ. ಪೊಲೀಸರು ತಕ್ಷಣ ಹಂತಕರನ್ನು ಪತ್ತೆ ಹಚ್ಚಿ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವೈಯಕ್ತಿಕವಾಗಿ ನಿಗಾ ವಹಿಸಿ ಪ್ರಚೋದನಾಕಾರಿ ಚಟುವಟಿಕೆಗಳಿಗೆ ಅವಕಾಶ ನೀಡದೆ ಬಿಗಿ ಬಂದೋಬಸ್ತ್ ಗೆ ವ್ಯವಸ್ಥೆ ಮಾಡಬೇಕು, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಶಿವಮೊಗ್ಗದಲ್ಲಿ ನಡೆದ ಯುವಕನ ಹತ್ಯೆ
ಅತ್ಯಂತ ಖಂಡನೀಯ.ಪೊಲೀಸರು ತಕ್ಷಣ ಹಂತಕರನ್ನು ಪತ್ತೆ ಹಚ್ಚಿ ಬಂಧಿಸಬೇಕು.@CMofKarnataka ಅವರು ವೈಯಕ್ತಿಕವಾಗಿ ನಿಗಾ ವಹಿಸಿ ಪ್ರಚೋದನಕಾರಿ ಚಟುವಟಿಕೆಗಳಿಗೆ ಅವಕಾಶ ನೀಡದೆ ಬಿಗಿಬಂದೋಬಸ್ತ್ಗೆ ವ್ಯವಸ್ಥೆ ಮಾಡಿ
ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಬೇಕು.— Siddaramaiah (@siddaramaiah) February 21, 2022
ಶಿವಮೊಗ್ಗದ ಭಾರತಿ ಕಾಲನಿಯಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷ ಎಂಬ ಯುವಕನನ್ನು ಕಳೆದ ರಾತ್ರಿ ಭೀಕರವಾಗಿ ಕೊಲೆ ಮಾಡಲಾಗಿದೆ. ಪರಿಣಾಮ, ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಜಿಲ್ಲೆಯಾದ್ಯಂತ ನಿಷೇಧಾಜ್ಞೆ(ಸಿಆರ್ಪಿಸಿ ಸೆಕ್ಷನ್ 144) ಜಾರಿಗೊಳಿಸಲಾಗಿದೆ.