ಬಿಗ್ಬಾಸ್ ರಿಯಾಲಿಟಿ ಶೋ ನಡೆಯುವ ಜಾಲಿವುಡ್ಗೆ ಹಾಕಲಾಗಿದ್ದ ಬೀಗವನ್ನು ತೆರೆಯುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿಗೆ ಆದೇಶಿಸಿದ್ದಾರೆ.
ಈ ಬಗ್ಗೆ ಸ್ವತಃ ಡಿ.ಕೆ.ಶಿವಕುಮಾರ್ ಅವರೇ ಮಾಹಿತಿ ನೀಡಿದ್ದಾರೆ.
ಬಿಗ್ಬಾಸ್ ಕನ್ನಡ ಚಿತ್ರೀಕರಣ ನಡೆಯುತ್ತಿರುವ ಬಿಡದಿಯಲ್ಲಿರುವ ಜಾಲಿವುಡ್ಗೆ ಹಾಕಲಾಗಿರುವ ಬೀಗವನ್ನು ತೆಗೆಯುವಂತೆ ನಾನು ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ. ಪರಿಸರ ನಿಯಮಗಳ ಪಾಲನೆ ನಮ್ಮ ಅತ್ಯಾದ್ಯತೆಯಾಗಿದ್ದರೂ ಮಾಡಲಾಗಿರುವ ಉಲ್ಲಂಘನೆಗಳ ಬಗ್ಗೆ ಕ್ರಮಕೈಗೊಳ್ಳುವುದಕ್ಕೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಡಿಯಲ್ಲಿರುವ ನಿಯಮಗಳ ಪ್ರಕಾರ ಸ್ಟುಡಿಯೋಗೆ ಕಾಲಾವಕಾಶ ನೀಡಬೇಕು.
ಪರಿಸರ ಸಂರಕ್ಷಣೆಯತ್ತ ನಮ್ಮ ಜವಾಬ್ದಾರಿಗೆ ಬದ್ಧನಾಗಿ ನಾನು ಕನ್ನಡ ಮನರಂಜನಾ ಇಂಡಸ್ಟ್ರಿಗೆ ಬೆಂಬಲಿಸಲು ಬದ್ಧನಾಗಿದ್ದೇನೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ.


