ಐವರು ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಐವರು IAS ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.

ಪಂಚಾಯತ್‌ ರಾಜ್‌ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯಾಗಿದ್ದ ರಂದೀಪ್‌.ಡಿ ಅವರನ್ನು ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.

ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ನಿಗಮದ ನಿರ್ದೇಶಕರಾಗಿದ್ದ ನಿತೇಶ್‌ ಪಾಟೀಲ್‌ ಅವರನ್ನು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಹುದ್ದೆಗಾಗಿ ಕಾಯುತ್ತಿದ್ದ ರಾಮಚಂದ್ರನ್‌.ಆರ್‌ ಅವರನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.

ಹುದ್ದೆಗಾಗಿ ಕಾಯುತ್ತಿದ್ದ ಡಾ ಸತೀಶ್‌ .ಬಿ.ಸಿ ಅವರನ್ನು ಸಣ್ಣ ಮತ್ತು ಮಧ್ಯಮ ಕೈಗಾರಿಕೆ ನಿಗಮದ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.

ಹುದ್ದೆಗಾಗಿ ಕಾಯುತ್ತಿದ್ದ ಎಂ.ಎಸ್‌.ದಿವಾಕರ ಇವರನ್ನು ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.

ಎಂ.ಎಸ್‌.ದಿವಾಕರ ಅವರಿಗೆ ಅಟಲ್‌ಜನಸ್ನೇಹಿ ಕೇಂದ್ರದ ನಿರ್ದೇಶಕ ಹುದ್ದೆಯನ್ನೂ ಹೆಚ್ಚುವರಿಯನ್ನಾಗಿ ನೀಡಲಾಗಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

Bengaluru: ವಾರ್ಡ್ ರಸ್ತೆ ಅಭಿವೃದ್ಧಿಗಾಗಿ 2000 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ : ಸಚಿವ ಕೃಷ್ಣ ಬೈರೇಗೌಡ

ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ವಾರ್ಡ್ ರಸ್ತೆಗಳನ್ನು ಸುಧಾರಿಸಿ ಅಭಿವೃದ್ಧಿಪಡಿಸಲು...

Exclusive: ಜನಪ್ರಿಯ ಆಸ್ಪತ್ರೆ ಮಾಲೀಕ Dr.ಬಶೀರ್‌ಗೆ ಮತ್ತೊಂದು ಶಾಕ್‌ – B ರಿಪೋರ್ಟ್‌ ವಜಾ – ಹಾಸನ ಪೊಲೀಸರಿಗೆ ಕೋರ್ಟ್‌ ಛೀಮಾರಿ

ರೋಗಿಯೊಬ್ಬರಿಗೆ ವಂಚಿಸಿದ್ದರ ಸಂಬಂಧ ಹಾಸನ ನಗರದಲ್ಲಿರುವ ಜನಪ್ರಿಯ ಆಸ್ಪತ್ರೆಯ ಮಾಲೀಕ ಡಾ.ಅಬ್ದುಲ್‌...

KAS ಅಧಿಕಾರಿ ಶೀತಲ್‌ T.S.ಗೆ ಕಂದಾಯ ಇಲಾಖೆಯಲ್ಲಿ ಆಗಿರುವ ಸಮಸ್ಯೆ ಏನು..?

ಕೆಎಎಸ್‌ ಅಧಿಕಾರಿ ಶೀತಲ್‌ ಟಿ.ಎಸ್‌.ಗೆ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಮಾಡಿರುವ...