ಮಿಲಿಟರಿ ಕ್ಯಾಂಟಿನ್‌ ರೀತಿಯಲ್ಲೇ ರಾಜ್ಯ ಸರ್ಕಾರಿ ನೌಕರರಿಗೂ ಸೂಪರ್‌ ಮಾರ್ಕೆಟ್‌..? – ಸುಳಿವು ಕೊಟ್ಟ ಸಚಿವ ಎಂ ಬಿ ಪಾಟೀಲ

ಪೊಲೀಸ್ ಮತ್ತು ಸೇನಾ‌ ಕ್ಯಾಂಟೀನ್ ಮಾದರಿಯಲ್ಲೇ ರಾಜ್ಯ ಸರಕಾರಿ ನೌಕರರಿಗೆ ದಿನನಿತ್ಯದ ಬದುಕಿಗೆ ಅಗತ್ಯವಿರುವ ಪ್ರತಿಯೊಂದು ವಸ್ತುವೂ ರಿಯಾಯಿತಿ ದರದಲ್ಲಿ ಸಿಗಬೇಕೆಂಬ ಉದ್ದೇಶದೊಂದಿಗೆ ಸರಕಾರಿ ಸ್ವಾಮ್ಯದ ಎಂಎಸ್‌ಐಎಲ್‌ ವತಿಯಿಂದ ಸೂಪರ್‌ ಮಾರ್ಕೆಟ್‌ ಆರಂಭಿಸುವ ಚಿಂತನೆ ಇದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.

ಈ ಸಂಬಂಧ ಅವರು ಖನಿಜ ಭವನದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್‌, ಎಂಎಸ್ಐಎಲ್ ವ್ಯವಸ್ಥಾಪಕ ನಿರ್ದೇಶಕ ಮನೋಜ ಕುಮಾರ ಸೇರಿದಂತೆ ಇತರ ಹಿರಿಯ ಅಧಿಕಾರಿಗಳೊಂದಿಗೆ ಬುಧವಾರ ಪ್ರಾಥಮಿಕ ಸುತ್ತಿನ ಸಭೆ ನಡೆಸಿದರು.

ಬಳಿಕ ಮಾಹಿತಿ ನೀಡಿದ ಅವರು, ರಾಜ್ಯದ ಪೊಲೀಸ್, ಅರೆ ಸೇನಾ ಪಡೆಗಳ ನೌಕರರಿಗೆ ಈ ರೀತಿಯ ಕ್ಯಾಂಟೀನ್‌ ಸೌಲಭ್ಯವಿದೆ. ರಾಜ್ಯದಲ್ಲಿ 6 ಲಕ್ಷ ಸರಕಾರಿ ನೌಕರರಿದ್ದಾರೆ. ಅವರ ಕುಟುಂಬಗಳ ಹಿತದೃಷ್ಟಿಯಿಂದ ಇಂಥದ್ದೊಂದು ಉಪಕ್ರಮ ಆರಂಭಿಸುವುದು ನಮ್ಮ ಚಿಂತನೆಯಾಗಿದೆ. ಇದಕ್ಕೆ ಸಬ್ಸಿಡಿ ಅಥವಾ ತೆರಿಗೆ ವಿನಾಯಿತಿ ಪಡೆದುಕೊಳ್ಳುವುದು ಹೇಗೆಂದು ಆರ್ಥಿಕ ಇಲಾಖೆಯ ಜತೆ ಚರ್ಚಿಸಲಾಗುವುದು. ಒಟ್ಟಿನಲ್ಲಿ ಇಂತಹ ಸೂಪರ್‌ ಮಾರ್ಕೆಟ್‌ ಮಳಿಗೆ ಆರಂಭಿಸುವ ಸಾಧ್ಯಾಸಾಧ್ಯತೆ ಕುರಿತು ತಮಗೆ ಒಂದು ತಿಂಗಳಲ್ಲಿ ವಿಸ್ತೃತ ವರದಿ ಸಲ್ಲಿಸುವಂತೆ ಎಂಎಸ್‌ಐಎಲ್‌ಗೆ ಸೂಚಿಸಲಾಗಿದೆ ಎಂದಿದ್ದಾರೆ.

ಉದ್ದೇಶಿತ ಎಂಎಸ್‌ಐಎಲ್‌ ಸೂಪರ್‌ ಮಾರ್ಕೆಟ್‌ನಲ್ಲಿ ನಮ್ಮ ಸರಕಾರಿ ನೌಕರರ ದಿನನಿತ್ಯದ ಬದುಕಿಗೆ ಬೇಕಾದ ದವಸ-ಧಾನ್ಯದಿಂದ ಹಿಡಿದು ಎಫ್‌ಎಂಸಿಜಿ ವಲಯದಲ್ಲಿ ಬರುವ ಪ್ರತಿಯೊಂದು ಪದಾರ್ಥವೂ ರಿಯಾಯಿತಿ ದರದಲ್ಲಿ ಸಿಗುವಂತಾದರೆ ಚೆನ್ನಾಗಿರುತ್ತದೆ. ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿ 4-5 ಮಳಿಗೆಗಳನ್ನು ತೆರೆಯುವ ಆಲೋಚನೆ ಇದೆ. ನಂತರದ ದಿನಗಳಲ್ಲಿ ಜಿಲ್ಲಾ ಕೇಂದ್ರಗಳಲ್ಲೂ ಇಂತಹ ಸೌಲಭ್ಯ ವಿಸ್ತರಣೆಗೆ ಮುಂದಾಗಬಹುದು. ಒಟ್ಟಿನಲ್ಲಿ ಅಧ್ಯಯನ ವರದಿ ಬಂದ ನಂತರ ತೀರ್ಮಾನಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಇದರಿಂದ ಸರಕಾರಿ ಸ್ವಾಮ್ಯದ ಎಂಎಸ್‌ಐಎಲ್‌ ಚಟುವಟಿಕೆಯೂ ವಿಸ್ತಾರಗೊಂಡು, ಆದಾಯದ ಮೂಲವೊಂದು ಸಿಗಲಿದೆ. ಅಲ್ಲದೆ, ಲಕ್ಷಾಂತರ ಸರಕಾರಿ ನೌಕರರ ಕುಟುಂಬಗಳಿಗೂ ಇದರಿಂದ ಪ್ರಯೋಜನವಾಗಲಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರಿ ನೌಕರರ ಸಂಘಟನೆಗಳ ಜತೆ ಮಾತುಕತೆ ನಡೆಸುವಂತೆಯೂ ಅವರು ಸೂಚಿಸಿದ್ದಾರೆ.

ಎಂಎಸ್‌ಐಎಲ್‌ನ ಚಟುವಟಿಕೆಗಳು ಈಗ ಸೀಮಿತ ಪ್ರಮಾಣದಲ್ಲಿವೆ. ಇದಕ್ಕೆ ಮತ್ತಷ್ಟು ಕಸುವು ತುಂಬಿ, ಆರ್ಥಿಕವಾಗಿ ಮತ್ತಷ್ಟು ಸದೃಢಗೊಳಿಸಬೇಕೆಂಬ ಆಲೋಚನೆ ತಮ್ಮದಾಗಿದೆ. ಇದರಿಂದ ಅಪಾರ ಸಂಖ್ಯೆಯಲ್ಲಿ ಪ್ರತ್ಯಕ್ಷ ಮತ್ತು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ, ಎಂಎಸ್ಐಎಲ್ ನಿರ್ದೇಶಕ ಚಂದ್ರಪ್ಪ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಚಪ್ಪಲಿ ವೀರ ರಾಜೀವ್‌ ಗೌಡನಿಗೆ ಜಾಮೀನು..!

ಶಿಡ್ಲಘಟ್ಟ ನಗರಸಭೆ ಆಯುಕ್ತೆಗೆ ಬೆದರಿಕೆಯೊಡ್ಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಕೇಸ್ ನಲ್ಲಿ...

ಬಿಗ್ ಬಾಸ್ ಸ್ಪಾನ್ಸರ್ – ಉದ್ಯಮಿ C.J.ರಾಯ್ ಆತ್ಮಹತ್ಯೆ

ಬೆಂಗಳೂರಿನ ಖ್ಯಾತ ಉದ್ಯಮಿ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿಜೆ ರಾಯ್ ಶುಕ್ರವಾರ...

BJPಯ ಅಶ್ವಥ್ ನಾರಾಯಣಗೆ 1 ವರ್ಷ ಜೈಲು- ಭೂಕಬಳಿಕೆ ಕೇಸ್ ನಲ್ಲಿ ಜೈಲು ಪಾಲಾದ BJP ಮಾಜಿ MLC..!

ಬಿಜೆಪಿ ಮಾಜಿ ಎಂಎಲ್ ಸಿ ಅಶ್ವಥ್ ನಾರಾಯಣಗೆ ಒಂದು ವರ್ಷ ಜೈಲು...

ಬೆಂಗಳೂರಲ್ಲಿ ಪವರ್ ಕಟ್- ಈ ಏರಿಯಾಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೂ ಕರೆಂಟ್ ಇರಲ್ಲ..!

ಬೆಂಗಳೂರಿನ 100ಕ್ಕೂ ಹೆಚ್ಚು ಬಡಾವಣೆಗಳಲ್ಲಿ ಜನವರಿ 21ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ....