ಗ್ರೇಟರ್‌ ಬೆಂಗಳೂರು ಚುನಾವಣೆಗೆ BJP ತಂಡ ಸಿದ್ಧ

ಗ್ರೇಟರ್‌ ಬೆಂಗಳೂರು (Greater Bengaluru Election) ಚುನಾವಣೆಗೆ ಬಿಜೆಪಿ (BJP Karnataka )ಯೂ ಸಿದ್ಧತೆ ಆರಂಭಿಸಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ನೇತೃತ್ವದಲ್ಲಿ ಸಂಯೋಜಕರ ತಂಡ, ಸಂಘಟನಾತ್ಮಕ ಜಿಲ್ಲೆಯ ಸಂಯೋಜಕರು ಮತ್ತು 5 ಪಾಲಿಕೆಗಳಿಗೆ ಪ್ರಮುಖರು ಮತ್ತು ಸಹ ಪ್ರಮುಖರನ್ನು ನೇಮಿಸಲಾಗಿದೆ.

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಸಂಯೋಜಕರ ತಂಡದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌, ವಿಧಾನಪರಿಷತ್‌ನಲ್ಲಿ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಮಾಜಿ ಸಚಿವ ಎಸ್‌.ಸುರೇಶ್‌ ಕುಮಾರ್‌, ಸಂಸದೆ ಕುಮಾರಿ ಶೋಭಾ ಕರಂದ್ಲಾಜೆ, ಸಂಸದ ಪಿ.ಸಿ.ಮೋಹನ್‌, ಸಂಸದ ಡಾ.ಸಿ.ಎನ್‌.ಮಂಜುನಾಥ್‌, ಸಂಸದ ತೇಜಸ್ವಿಸೂರ್ಯ, ಸಂಸದ ಡಾ.ಕೆ.ಸುಧಾಕರ್‌, ಮಾಜಿ ಶಾಸಕ ಎನ್‌.ಎಸ್‌.ನಂದೀಶ್‌ ರೆಡ್ಡಿ ಇದ್ದಾರೆ.

ಸಂಘಟನಾತ್ಮಕ ಜಿಲ್ಲೆಯ ಪ್ರಮುಖರಾಗಿ ಬೆಂಗಳೂರು ದಕ್ಷಿಣಕ್ಕೆ ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ, ಬೆಂಗಳೂರು ಉತ್ತರಕ್ಕೆ ಮಾಜಿ ಉಪಮೇಯರ್‌ ಎಸ್‌.ಹರೀಶ್‌, ಬೆಂಗಳೂರು ಕೇಂದ್ರಕ್ಕೆ ಎ.ಆರ್‌. ಸಪ್ತಗಿರಿ ಗೌಡ ಅವರನ್ನು ನೇಮಿಸಲಾಗಿದೆ.

ಪಾಲಿಕೆ ಪ್ರಮುಖರು ಮತ್ತು ಸಹ ಪ್ರಮುಖರನ್ನಾಗಿ ಬೆಂಗಳೂರು ಪೂರ್ವಕ್ಕೆ ಮಾಜಿ ಸಚಿವ ಎಂ.ಟಿ.ಬಿ.ನಾಗರಾಜ್‌, ಕೆ.ಎಸ್‌.ನವೀನ್‌, ಬೆಂಗಳೂರು ಉತ್ತರಕ್ಕೆ ಶಾಸಕ ಮುನಿರತ್ನ ನಾಯ್ಡು ಮತ್ತು ಭಾರತಿ ಶೆಟ್ಟಿ, ಬೆಂಗಳೂರು ದಕ್ಷಿಣಕ್ಕೆ ಬೈರತಿ ಬಸವರಾಜ್‌, ಪರಿಷತ್‌ನಲ್ಲಿ ಬಿಜೆಪಿ ಮುಖ್ಯ ಸಚೇತಕ ಎನ್‌.ರವಿಕುಮಾರ್‌, ಬೆಂಗಳೂರು ಕೇಂದ್ರಕ್ಕೆ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ,  ಎಂಎಲ್‌ಸಿ ಡಿ.ಎಸ್‌.ಅರುಣ್‌, ಬೆಂಗಳೂರು ಪಶ್ಚಿಮಕ್ಕೆ ಮಾಜಿ ಸಚಿವ ಡಾ.ಕೆ.ಗೋಪಾಲಯ್ಯ, ಎ.ನಾರಾಯಣಸ್ವಾಮಿ, ಅಶ್ವತ್ಥ್‌ ನಾರಾಯಣ ಅವರನ್ನು ನೇಮಿಸಿ ಬಿಜೆಪಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಚಪ್ಪಲಿ ವೀರ ರಾಜೀವ್‌ ಗೌಡನಿಗೆ ಜಾಮೀನು..!

ಶಿಡ್ಲಘಟ್ಟ ನಗರಸಭೆ ಆಯುಕ್ತೆಗೆ ಬೆದರಿಕೆಯೊಡ್ಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಕೇಸ್ ನಲ್ಲಿ...

ಬಿಗ್ ಬಾಸ್ ಸ್ಪಾನ್ಸರ್ – ಉದ್ಯಮಿ C.J.ರಾಯ್ ಆತ್ಮಹತ್ಯೆ

ಬೆಂಗಳೂರಿನ ಖ್ಯಾತ ಉದ್ಯಮಿ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿಜೆ ರಾಯ್ ಶುಕ್ರವಾರ...

BJPಯ ಅಶ್ವಥ್ ನಾರಾಯಣಗೆ 1 ವರ್ಷ ಜೈಲು- ಭೂಕಬಳಿಕೆ ಕೇಸ್ ನಲ್ಲಿ ಜೈಲು ಪಾಲಾದ BJP ಮಾಜಿ MLC..!

ಬಿಜೆಪಿ ಮಾಜಿ ಎಂಎಲ್ ಸಿ ಅಶ್ವಥ್ ನಾರಾಯಣಗೆ ಒಂದು ವರ್ಷ ಜೈಲು...

ಬೆಂಗಳೂರಲ್ಲಿ ಪವರ್ ಕಟ್- ಈ ಏರಿಯಾಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೂ ಕರೆಂಟ್ ಇರಲ್ಲ..!

ಬೆಂಗಳೂರಿನ 100ಕ್ಕೂ ಹೆಚ್ಚು ಬಡಾವಣೆಗಳಲ್ಲಿ ಜನವರಿ 21ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ....