ಬೆಂಗಳೂರು-ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್‌ ರೈಲು

ಬೆಂಗಳೂರು-ಮುಂಬೈಗೆ (Bengaluru-Mumbai) ಸಂಚರಿಸುವ ಸೂಪರ್‌ಫಾಸ್ಟ್‌ ರೈಲು (Super Fast Rail) ದಾವಣೆಗೆರೆ (Davanagere), ಹುಬ್ಬಳ್ಳಿ (Hubli) ಮತ್ತು ಬೆಳಗಾವಿ (Belagavi) ಮೂಲಕ ಹೊಸ ರೈಲು ಸಂಚರಿಸುವುದಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರು ಅನುಮೋದನೆ ನೀಡಿದ್ದಾರೆ.

ಅಕ್ಟೋಬರ್‌ 10ರಂದು ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರದ ಸಂಸದರೂ ಆಗಿರುವ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿಯವರು ಪತ್ರ ಬರೆದಿದ್ದರು.

ನಮ್ಮ ಹುಬ್ಬಳ್ಳಿ-ಧಾರವಾಡ ಮೂಲಕ ಸಂಚರಿಸುವ ಬೆಂಗಳೂರು- ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಅನುಮೋದನೆ ಪತ್ರವನ್ನು ನೀಡಿದ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ @AshwiniVaishnawಅವರಿಗೆ ಅನಂತ ಧನ್ಯವಾದಗಳು.

ನಮ್ಮ ಬಹುದಿನದ ಬೇಡಿಕೆಯಾಗಿದ್ದ ಈ ರೈಲಿಗಾಗಿ ನಾನು ಕೇಂದ್ರ ರೇಲ್ವೆ ಸಚಿವರಿಗೆ ವಿನಂತಿಸಿದ್ದೆ. ಈ ಸೂಪರ್ ಫಾಸ್ಟ್ ರೈಲು ಕರ್ನಾಟಕದ ಮಧ್ಯಭಾಗ ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಮಾರ್ಗವಾಗಿ ವಾಣಿಜ್ಯ ನಗರಿ ಮುಂಬೈಗೆ ಸಂಚಾರಿಸಲಿದ್ದು, ಲಕ್ಷಾಂತರ ಜನರಿಗೆ ಈ ರೈಲು ಸಂಚಾರದಿಂದ ಅನುಕೂಲವಾಗಲಿದೆ‌ ಹಾಗೂ ವ್ಯಾಪಾರ‌ ವಹಿವಾಟು ಮತ್ತಷ್ಟು ವೃದ್ಧಿಯಾಗಲಿದೆ.

ಈ ಹೊಸ ರೈಲು ಪ್ರಾರಂಭಿಸಲು ಅನುವು ಮಾಡಿಕೊಟ್ಟ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು @narendramodi ಮತ್ತು ಆತ್ಮೀಯ ಸಹೋದ್ಯೋಗಿ ಮಿತ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್, ರೈಲ್ವೆ ರಾಜ್ಯ ಸಚಿವ ಶ್ರೀ ವಿ. ಸೋಮಣ್ಣ @VSOMANNA_BJP ಅವರಿಗೆ ಅನಂತ ಧನ್ಯವಾದಗಳು

ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿಯವರು ಧನ್ಯವಾದ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ್ರಧಾನಿ ಮೋದಿ ಸರ್ಕಾರಕ್ಕೆ ಲೋಕಸಭೆಯಲ್ಲೇ ಸೋಲು – ಮೀಸಲಾತಿ ಮಸೂದೆ ತಿರಸ್ಕಾರ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ...

ಬ್ರಿಟನ್‌ ಪೌರತ್ವ: ರಾಹುಲ್‌ ಗಾಂಧಿ ವಿರುದ್ಧ FIR ದಾಖಲಿಸಿ ತನಿಖೆಗೆ ಸೂಚನೆ

ಭಾರತದ ಪೌರತ್ವದ ಜೊತೆಗೆ ಬ್ರಿಟನ್‌ನ ಪೌರತ್ವವನ್ನು ಪಡೆದಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ...

ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವನಪರ್ಯಂತ ಜೈಲು – ಕೋರ್ಟ್‌ ತೀರ್ಪು

ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ....

ಕರ್ನಾಟಕದ ಲೋಕಸಭಾ ಸ್ಥಾನಗಳ ಸಂಖ್ಯೆ ಹೆಚ್ಚಳ, ಆದರೆ ಪ್ರಾತಿನಿಧ್ಯ ಇಳಿಕೆ..!

ಲೋಕಸಭಾ ಕ್ಷೇತ್ರಗಳ ಮರು ವಿಂಗಡಣೆಯಿಂದಾಗಿ ಕರ್ನಾಟಕದಲ್ಲೂ ಲೋಕಸಭಾ ಕ್ಷೇತ್ರಗಳ ಸಂಖ್ಯೆ ಹೆಚ್ಚಳವಾಗಲಿದೆ. ಲೋಕಸಭಾ...