ಬೆಂಗಳೂರು-ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್‌ ರೈಲು

ಬೆಂಗಳೂರು-ಮುಂಬೈಗೆ (Bengaluru-Mumbai) ಸಂಚರಿಸುವ ಸೂಪರ್‌ಫಾಸ್ಟ್‌ ರೈಲು (Super Fast Rail) ದಾವಣೆಗೆರೆ (Davanagere), ಹುಬ್ಬಳ್ಳಿ (Hubli) ಮತ್ತು ಬೆಳಗಾವಿ (Belagavi) ಮೂಲಕ ಹೊಸ ರೈಲು ಸಂಚರಿಸುವುದಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರು ಅನುಮೋದನೆ ನೀಡಿದ್ದಾರೆ.

ಅಕ್ಟೋಬರ್‌ 10ರಂದು ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರದ ಸಂಸದರೂ ಆಗಿರುವ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿಯವರು ಪತ್ರ ಬರೆದಿದ್ದರು.

ನಮ್ಮ ಹುಬ್ಬಳ್ಳಿ-ಧಾರವಾಡ ಮೂಲಕ ಸಂಚರಿಸುವ ಬೆಂಗಳೂರು- ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಅನುಮೋದನೆ ಪತ್ರವನ್ನು ನೀಡಿದ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ @AshwiniVaishnawಅವರಿಗೆ ಅನಂತ ಧನ್ಯವಾದಗಳು.

ನಮ್ಮ ಬಹುದಿನದ ಬೇಡಿಕೆಯಾಗಿದ್ದ ಈ ರೈಲಿಗಾಗಿ ನಾನು ಕೇಂದ್ರ ರೇಲ್ವೆ ಸಚಿವರಿಗೆ ವಿನಂತಿಸಿದ್ದೆ. ಈ ಸೂಪರ್ ಫಾಸ್ಟ್ ರೈಲು ಕರ್ನಾಟಕದ ಮಧ್ಯಭಾಗ ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಮಾರ್ಗವಾಗಿ ವಾಣಿಜ್ಯ ನಗರಿ ಮುಂಬೈಗೆ ಸಂಚಾರಿಸಲಿದ್ದು, ಲಕ್ಷಾಂತರ ಜನರಿಗೆ ಈ ರೈಲು ಸಂಚಾರದಿಂದ ಅನುಕೂಲವಾಗಲಿದೆ‌ ಹಾಗೂ ವ್ಯಾಪಾರ‌ ವಹಿವಾಟು ಮತ್ತಷ್ಟು ವೃದ್ಧಿಯಾಗಲಿದೆ.

ಈ ಹೊಸ ರೈಲು ಪ್ರಾರಂಭಿಸಲು ಅನುವು ಮಾಡಿಕೊಟ್ಟ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು @narendramodi ಮತ್ತು ಆತ್ಮೀಯ ಸಹೋದ್ಯೋಗಿ ಮಿತ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್, ರೈಲ್ವೆ ರಾಜ್ಯ ಸಚಿವ ಶ್ರೀ ವಿ. ಸೋಮಣ್ಣ @VSOMANNA_BJP ಅವರಿಗೆ ಅನಂತ ಧನ್ಯವಾದಗಳು

ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿಯವರು ಧನ್ಯವಾದ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಚಪ್ಪಲಿ ವೀರ ರಾಜೀವ್‌ ಗೌಡನಿಗೆ ಜಾಮೀನು..!

ಶಿಡ್ಲಘಟ್ಟ ನಗರಸಭೆ ಆಯುಕ್ತೆಗೆ ಬೆದರಿಕೆಯೊಡ್ಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಕೇಸ್ ನಲ್ಲಿ...

ಬಿಗ್ ಬಾಸ್ ಸ್ಪಾನ್ಸರ್ – ಉದ್ಯಮಿ C.J.ರಾಯ್ ಆತ್ಮಹತ್ಯೆ

ಬೆಂಗಳೂರಿನ ಖ್ಯಾತ ಉದ್ಯಮಿ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿಜೆ ರಾಯ್ ಶುಕ್ರವಾರ...

BJPಯ ಅಶ್ವಥ್ ನಾರಾಯಣಗೆ 1 ವರ್ಷ ಜೈಲು- ಭೂಕಬಳಿಕೆ ಕೇಸ್ ನಲ್ಲಿ ಜೈಲು ಪಾಲಾದ BJP ಮಾಜಿ MLC..!

ಬಿಜೆಪಿ ಮಾಜಿ ಎಂಎಲ್ ಸಿ ಅಶ್ವಥ್ ನಾರಾಯಣಗೆ ಒಂದು ವರ್ಷ ಜೈಲು...

ಬೆಂಗಳೂರಲ್ಲಿ ಪವರ್ ಕಟ್- ಈ ಏರಿಯಾಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೂ ಕರೆಂಟ್ ಇರಲ್ಲ..!

ಬೆಂಗಳೂರಿನ 100ಕ್ಕೂ ಹೆಚ್ಚು ಬಡಾವಣೆಗಳಲ್ಲಿ ಜನವರಿ 21ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ....