ಪ್ರತಿಕ್ಷಣ Exclusive Part -1: BJP ಸರ್ಕಾರದಲ್ಲಿ ಬೆಳೆ ಹಾನಿ ಪರಿಹಾರ ಹಗರಣ – ಲೋಕಾಯುಕ್ತಕ್ಕೆ ದೂರು, DCಗೆ ನೋಟಿಸ್‌

ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದ ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಬರೋಬ್ಬರೀ 48 ಕೋಟಿ ರೂಪಾಯಿ ಬೆಳೆ ಹಾನಿ ಪರಿಹಾರ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತಕ್ಕೆ (Karnataka Lokayukta) ದೂರು ಸಲ್ಲಿಕೆಯಾಗಿದೆ.

ಚಿತ್ರದುರ್ಗದ ಮೂಲದ ದಮನಿತರ ಭೂಮಿ ಹಕ್ಕು ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಹೊಳೆಯಪ್ಪ ಕೆ.ಸಾಕ್ಯ ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.

ಫೆಬ್ರವರಿ 19ರಂದು ಸಲ್ಲಿಸಿರುವ ದೂರಿನಲ್ಲಿ ಚಿತ್ರದುರ್ಗ ಜಿಲ್ಲಾಧಿಕಾರಿ ಮೊದಲನೇ ಪ್ರತಿವಾದಿಯಾಗಿದ್ದಾರೆ.

(ಪ್ರತಿಕ್ಷಣ ಸುದ್ದಿಗಾಗಿ ವಾಟ್ಸಾಪ್‌ ನಂಬರ್‌ 97411 83147 ಅಥವಾ pratikshananews@gmail.com ನ್ನು ಸಂಪರ್ಕಿಸಿ)

ಚಿತ್ರದುರ್ಗ ತಹಶೀಲ್ದಾರ್‌ -2ನೇ ಪ್ರತಿವಾದಿ, ಚಳ್ಳಕೆರೆ ತಹಶೀಲ್ದಾರ್‌ – 3ನೇ ಪ್ರತಿವಾದಿ, ಹಿರಿಯೂರು ತಹಶೀಲ್ದಾರ್‌ – 4ನೇ ಪ್ರತಿವಾದಿ, ಮೊಳಕಾಲ್ಮೂರು ತಹಶೀಲ್ದಾರ್‌ -5ನೇ ಪ್ರತಿವಾದಿ, ಹೊಳಲ್ಕೆರೆ ತಹಶೀಲ್ದಾರ್‌ – 6ನೇ ಪ್ರತಿವಾದಿ ಮತ್ತು ಹೊಸದುರ್ಗ ತಹಶೀಲ್ದಾರ್‌ – 7ನೇ ಪ್ರತಿವಾದಿಯಾಗಿದ್ದಾರೆ.

ಈ ದೂರಿನ ಹಿನ್ನೆಲೆಯಲ್ಲಿ ವರದಿ ನೀಡುವಂತೆ ಚಿತ್ರದುರ್ಗ ಜಿಲ್ಲಾಧಿಕಾರಿಗೆ ಕರ್ನಾಟಕ ಲೋಕಾಯುಕ್ತ ಸೂಚನೆ ನೀಡಿದೆ.

2022-23ರ ಅವಧಿಯಲ್ಲಿ ಭಾರೀ ಮಳೆಯಿಂದಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ ಅತಿವೃಷ್ಟಿ ಹಿನ್ನೆಲೆಯಲ್ಲಿ ರೈತರಿಗೆ ಬೆಳೆ ಹಾನಿ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಹಣವನ್ನು ಬಿಡುಗಡೆ ಮಾಡಿತ್ತು.

ಆದರೆ ಆ ಬೆಳೆ ಹಾನಿ ಪರಿಹಾರವನ್ನು ಅರ್ಹ ರೈತರಿಗೆ ವಿತರಿಸುವ ಬದಲು ಅಧಿಕಾರಿಗಳು ತಮ್ಮ ನೆಂಟರಿಗೆ, ಆಪ್ತರಿಗೆ, ಪರಿಚಯಸ್ಥರಿಗೆ ಜಮೆ ಮಾಡಿದ್ದಾರೆ. ಪಹಣಿಯಲ್ಲಿ (RTC) ರೈತರಿಗೆ ಬೆಳೆ ಹಾನಿ ಜಮೆ ಆಗಿದೆ ಎಂದು ತೋರಿಸಿದರೂ, ಆದರೆ ಜಮೆ ಆಗಿರುವುದು ಮಾತ್ರ ಬೇರೆಯವರ ಬ್ಯಾಂಕ್‌ ಖಾತೆಗಳಿಗೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.

2022ರ ಅಕ್ಟೋಬರ್‌ 21ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಅತೀವೃಷ್ಟಿ ಕಾರಣದಿಂದ ಬೆಳೆ ಹಾನಿ ಪರಿಹಾರ ವಿತರಣೆಗಾಗಿ 258 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿ ಆದೇಶ ನೀಡಿತ್ತು.

2022ರ ಅಕ್ಟೋಬರ್‌ 10ರಂದು ಕೇಂದ್ರ ಗೃಹ ಸಚಿವಾಲಯವು ಬೆಳೆಹಾನಿ ಪರಿಹಾರದ ಮೊತ್ತವನ್ನು ಪರಿಷ್ಕರಣೆ ಮಾಡಿತ್ತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗಿರೀಶ್‌ ಮಟ್ಟಣ್ಣನವರ್‌ ವಿರುದ್ಧ ತನಿಖೆಗೆ ಆದೇಶ

ಗಿರೀಶ್‌ ಮಟ್ಟಣ್ಣನವರ್‌ (Girish Mattannanavar) ವಿರುದ್ಧ ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ...

ಭೂತಾನ್‌ ಪ್ರವಾಸಕ್ಕೆ ಹೊರಟ ಪ್ರಧಾನಿ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (Prime Minister Narendra Modi) ಇವತ್ತಿನಿಂದ...

ಹಾಸನದ ಜನಪ್ರಿಯ ಆಸ್ಪತ್ರೆ ಮಾಲೀಕ ಡಾ.ಅಬ್ದುಲ್‌ ಬಶೀರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲು

ನ್ಯಾಯಾಲಯಕ್ಕೆ ಸುಳ್ಳು ಸಾಕ್ಷ್ಯ ಮತ್ತು ಸುಳ್ಳು ದಾಖಲೆಗಳನ್ನು ಸಲ್ಲಿಸಿದ ಆರೋಪದಡಿಯಲ್ಲಿ ಹಾಸನ...

ದೆಹಲಿ ಕೆಂಪುಕೋಟೆ ಬಳಿ ಸ್ಫೋಟ – 8 ಸಾವು

ದೆಹಲಿಯ ಕೆಂಪುಕೋಟೆಯಲ್ಲಿ ಸಂಭವಿಸಿರುವ ಕಾರ್‌ ಬಾಂಬ್‌ ಸ್ಫೋಟದಲ್ಲಿ 8 ಮಂದಿ ಪ್ರಾಣ...