3 ಜಿಲ್ಲೆಗಳಿಗೆ ಐವರು ತಹಶೀಲ್ದಾರ್‌ಗಳ ತಂಡ ಭೇಟಿ

ಭಾರೀ ಮಳೆಯಿಂದ ಕಲ್ಯಾಣ ಕರ್ನಾಟಕದ ಎರಡು ಜಿಲ್ಲೆಗಳೂ ಒಳಗೊಂಡಂತೆ ಮೂರು ಜಿಲ್ಲೆಗಳಲ್ಲಿ ಶಾಲೆಗಳಿಗೆ ಆಗಿರುವ ಹಾನಿಯ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸುವುದಕ್ಕೆ ರಾಜ್ಯ ಸರ್ಕಾರ ಐವರು ತಹಶೀಲ್ದಾರ್‌ಗಳ ಮೂರು ತಂಡ ರಚಿಸಿದೆ.

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ಆಯುಕ್ತಾಲಯಲ್ಲಿದರುವ ತಹಶೀಲ್ದಾರ್‌ಗಳಿಗೆ ಜವಾಬ್ದಾರಿ ನೀಡಲಾಗಿದೆ.

ತಹಶೀಲ್ದಾರ್‌ಗಳಾದ ಕೆ.ಕೋಮಲ ಮತ್ತು ಪ್ರಶಾಂತ್‌ ಎನ್‌.ಎಸ್‌ ಇಬ್ಬರೂ ಬೀದರ್‌ ಜಿಲ್ಲೆಯಲ್ಲೂ, ತಹಶೀಲ್ದಾರ್‌ಗಳಾದ ಆರ್‌.ಮಂಜುಳಮ್ಮ ಮತ್ತು ವಿ.ಭಾಗ್ಯ ಹಾವೇರಿ ಜಿಲ್ಲೆಯಲ್ಲೂ ಮತ್ತು ತಹಶೀಲ್ದಾರ್‌ ಆರ್‌.ವಿ.ಮಂಜುನಾಥ್‌ ಕಲ್ಬುರ್ಗಿ ಜಿಲ್ಲೆಯಲ್ಲೂ ಅಧ್ಯಯನ ಕೈಗೊಳ್ಳಲಿದ್ದಾರೆ.

ಅಕ್ಟೋಬರ್‌ 27, 28 ಮತ್ತು 29ರಂದು ಅಧ್ಯಯನ ಕೈಗೊಂಡು ಚಿತ್ರಗಳೊಂದಿಗೆ ಸವಿವರವಾದ ವರದಿಯನ್ನು ಆಯಕ್ತಾಲಯಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ.

ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ನೇತೃತ್ವದಲ್ಲಿ ನಿನ್ನೆ ನಡೆಸಿದ್ದ ಸಭೆಯಲ್ಲಿ ಅಧ್ಯಯನ ತಂಡ ರಚಿಸುವುದಕ್ಕೆ ನಿರ್ಧರಿಸಲಾಗಿತ್ತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗಿರೀಶ್‌ ಮಟ್ಟಣ್ಣನವರ್‌ ವಿರುದ್ಧ ತನಿಖೆಗೆ ಆದೇಶ

ಗಿರೀಶ್‌ ಮಟ್ಟಣ್ಣನವರ್‌ (Girish Mattannanavar) ವಿರುದ್ಧ ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ...

ಭೂತಾನ್‌ ಪ್ರವಾಸಕ್ಕೆ ಹೊರಟ ಪ್ರಧಾನಿ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (Prime Minister Narendra Modi) ಇವತ್ತಿನಿಂದ...

ಹಾಸನದ ಜನಪ್ರಿಯ ಆಸ್ಪತ್ರೆ ಮಾಲೀಕ ಡಾ.ಅಬ್ದುಲ್‌ ಬಶೀರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲು

ನ್ಯಾಯಾಲಯಕ್ಕೆ ಸುಳ್ಳು ಸಾಕ್ಷ್ಯ ಮತ್ತು ಸುಳ್ಳು ದಾಖಲೆಗಳನ್ನು ಸಲ್ಲಿಸಿದ ಆರೋಪದಡಿಯಲ್ಲಿ ಹಾಸನ...

ದೆಹಲಿ ಕೆಂಪುಕೋಟೆ ಬಳಿ ಸ್ಫೋಟ – 8 ಸಾವು

ದೆಹಲಿಯ ಕೆಂಪುಕೋಟೆಯಲ್ಲಿ ಸಂಭವಿಸಿರುವ ಕಾರ್‌ ಬಾಂಬ್‌ ಸ್ಫೋಟದಲ್ಲಿ 8 ಮಂದಿ ಪ್ರಾಣ...