ರೈಲ್ವೆ ನಿಲ್ದಾಣದ ಹೆಸರು ಬದಲಾವಣೆ

ಔರಾಂಗಬಾದ್‌ ರೈಲ್ವೆ ನಿಲ್ದಾಣದ (Aurangabad Railway Station) ಹೆಸರನ್ನು ಬದಲಾವಣೆ ಮಾಡಲಾಗಿದೆ. ಔರಾಂಗಬಾದ್‌ ರೈಲು ನಿಲ್ದಾಣಕ್ಕೆ ಛತ್ರಪತಿ ಸಂಭಾಜಿನಗರ್‌ ರೈಲ್ವೆ ನಿಲ್ದಾಣ (CHHATRAPATI SAMBHAJINAGAR Railway Station) ಎಂದು ಹೊಸ ಹೆಸರು ಇಡಲಾಗಿದೆ.

ಈ ಬಗ್ಗೆ ದಕ್ಷಿಣ ಮಧ್ಯ ರೈಲ್ವೆ ಅಧಿಕೃತ ಪ್ರಕಟಣೆ ಹೊರಡಿಸಿದೆ.

ಇನ್ನು ಮುಂದೆ ಮಹಾರಾಷ್ಟ್ರದಲ್ಲಿರುವ  ಔರಂಗಾಬಾದ್‌ ರೈಲ್ವೆ ನಿಲ್ದಾಣವನ್ನು ಛತ್ರಪತಿ ಸಂಭಾಜಿನಗರ್‌ ರೈಲ್ವೆ ನಿಲ್ದಾಣ ಎಂದು ಕರೆಯುವಂತೆ ರೈಲ್ವೆ ಇಲಾಖೆ ಸೂಚಿಸಿದೆ.

ಛತ್ರಪತಿ ಸಂಭಾಜಿನಗರ ರೈಲ್ವೆ ನಿಲ್ದಾಣಕ್ಕೆ ಸಿಪಿಎಸ್‌ಎನ್‌ ಎಂಬ ಸ್ಟೇಷನ್‌ ಕೋಡ್‌ನ್ನೂ ಕೊಡಲಾಗಿದೆ. ಈ ಹಿಂದೆ ಈ ರೈಲ್ವೆ ನಿಲ್ದಾಣಕ್ಕೆ ಎಡಬ್ಲೂಬಿ ಎಂಬ ಸ್ಟೇಷನ್‌ ಕೋಡ್‌ ನೀಡಲಾಗಿತ್ತು.

ಹೆಸರು ಬದಲಾವಣೆಗೆ ಈ ಹಿಂದೆ ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿದ್ದ ಉದ್ಧವ್‌ ಠಾಕ್ರೆ ನೇತೃತ್ವದ ಮಹಾ ವಿಕಾಸ್‌ ಅಗಾಡಿ ಸರ್ಕಾರ ಕ್ರಮ ಆರಂಭಿಸಿತ್ತು.

1900ರಲ್ಲಿ ಔರಾಂಗಬಾದ್‌ ರೈಲ್ವೆ ನಿಲ್ದಾಣವನ್ನು ತೆರೆಯಲಾಗಿತ್ತು. ಹೈದ್ರಾಬಾದ್‌ನ ಏಳನೇ ನಿಜಾಮನಾಗಿದ್ದ ಮಿರ್‌ ಒಸ್ಮಾನ್‌ ಅಲಿ ಖಾನ್‌ ಈ ನಿಲ್ದಾಣವನ್ನು ನಿರ್ಮಿಸಿದ್ದ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಗಳಿಗೆ ಆಡಳಿತಾಧಿಕಾರಿಗಳ ನೇಮಕ

ಮೂರು ನಗರಸಭೆ, ಮೂವತ್ತೆಂಟು ಪುರಸಭೆ ಹಾಗೂ ಹದಿನೇಳು ಪಟ್ಟಣ ಪಂಚಾಯತಿಗಳಿಗೆ ಆಡಳಿತಾಧಿಕಾರಿಗಳನ್ನು...

ಪ್ರತಿಕ್ಷಣ Exclusive: ಸ್ಪೀಕರ್‌ ಖಾದರ್‌ ವಿರುದ್ಧ ಅವಿಶ್ವಾಸ ನಿರ್ಣಯ..?

ಅಕ್ಷಯ್‌ ಕುಮಾರ್‌.ಯು. - ಮುಖ್ಯ ಸಂಪಾದಕರು, ಪ್ರತಿಕ್ಷಣ ವಿಧಾನಸಭೆಯ ಸಭಾಧ್ಯಕ್ಷರಾಗಿರುವ (Karnataka Legislative...

ಬಿಹಾರದಲ್ಲಿ ಕಾಂಗ್ರೆಸ್‌ಗೆ ಬಾಸುಂಡೆ – ಸಿದ್ದರಾಮಯ್ಯ-ಯತೀಂದ್ರಗೆ ಹಾಲು ಕುಡಿದಷ್ಟೇ ಖುಷಿ..!

ಅಕ್ಷಯ್‌ ಕುಮಾರ್‌.ಯು. - ಮುಖ್ಯ ಸಂಪಾದಕರು, ಪ್ರತಿಕ್ಷಣ ಬಿಹಾರದಲ್ಲಿ ಕಾಂಗ್ರೆಸ್‌ನ್ನು ಬಿಲ್‌ಕುಲ್‌ ನಂಬದ...

ಹಿರಿ ಖರ್ಗೆ ಅಧ್ಯಕ್ಷ – ಕಾಂಗ್ರೆಸ್‌ ಮತ್ತಷ್ಟು ನಾಶ – ಮಗ ಕಿರಿ ಖರ್ಗೆಗಷ್ಟೇ ಲಾಭ..!

ಅಕ್ಷಯ್‌ ಕುಮಾರ್‌.ಯು. - ಮುಖ್ಯ ಸಂಪಾದಕರು, ಪ್ರತಿಕ್ಷಣ ಕಾಂಗ್ರೆಸ್‌ನವರ ಆದರಣೀಯ ನಾಯಕ ಜವಾಹರ್‌ಲಾಲ್‌...