ಬೆಳಗಾವಿ (Belagavi) ಜಿಲ್ಲೆಯಲ್ಲಿ ಎರಡು ಕಾಡಾನೆಗಳ (Wild Elephants) ಸಾವಿನ ಸಂಬಂಧ ಅರಣ್ಯ ಸಚಿವ (Forest Minister) ಈಶ್ವರ್ ಖಂಡ್ರೆ (Eshwar Khandre) ಅವರು ತನಿಖೆಗೆ ಆದೇಶಿಸಿದ್ದಾರೆ.
ಬೆಳಗಾವಿ ಜಿಲ್ಲೆ ಖಾನಾಪುರ ಬಳಿ ಸುಳೇಗಾಳಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಎರಡು ಆನೆಗಳು ಸಾವಿಗೀಡಾಗಿರುವುದು ನೋವಿನ ಸಂಗತಿ. ಕಳೆದ ಕೆಲವು ದಿನಗಳಿಂದ ಆನೆಗಳು ಇದೇ ಪ್ರದೇಶದಲ್ಲಿ ಓಡಾಡುತ್ತಿದ್ದರೂ ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿ ಸೂಕ್ತ ಕ್ರಮಕೈಗೊಳ್ಳದೇ ಕರ್ತವ್ಯ ಲೋಪ ಮಾಡಿರುವುದೇ ಆನೆಗಳ ಸಾವಿಗೆ ಕಾರಣ ಎಂಬ ಆರೋಪವಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಬೇಲಿಗೆ ವಿದ್ಯುತ್ ಸಂಪರ್ಕ ನೀಡಿ ಆನೆಗಳ ಸಾವಿಗೆ ಕಾರಣರಾದವರ ವಿರುದ್ಧ ಕಾನೂನು ರೀತ್ಯ ಪ್ರಕರಣ ದಾಖಲಿಸಲು ಮತ್ತು ಒಂದೊಮ್ಮೆ ಅರಣ್ಯ ಅಧಿಕಾರಿ, ಸಿಬ್ಬಂದಿಯ ಲೋಪ ಇದ್ದಲ್ಲಿ ಶಿಸ್ತುಕ್ರಮದ ಶಿಫಾರಸ್ಸಿನೊಂದಿಗೆ 5 ದಿನಗಳ ಒಳಗಾಗಿ ವರದಿ ಸಲ್ಲಿಸುವಂತೆ
ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪತ್ರ ಮುಖೇನ ಸೂಚಿಸಿದ್ದಾರೆ.


