GBA Election: ವಾರ್ಡ್‌ವಾರು ಮೀಸಲಾತಿ ಪ್ರಕಟಿಸಿ – ಸುಪ್ರೀಂಕೋರ್ಟ್‌ ಆದೇಶ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ (Greater Bengaluru Authority) ವ್ಯಾಪ್ತಿಯಲ್ಲಿರುವ ಐದು ಮಹಾನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಡಿಸೆಂಬರ್‌ 15ರೊಳಗೆ ವಾರ್ಡ್‌ವಾರು ಮೀಸಲಾತಿಯ (Ward Wise Reservation) ಅಧಿಸೂಚನೆ ಪ್ರಕಟಿಸುವಂತೆ ಸುಪ್ರೀಂಕೋರ್ಟ್‌ (Supreme Court) ಕರ್ನಾಟಕ ಸರ್ಕಾರಕ್ಕೆ (State Of Karnataka) ಸೂಚಿಸಿದೆ.

ನವೆಂಬರ್‌ 15ರೊಳಗೆ ವಾರ್ಡ್‌ವಾರು ಪುನರ್‌ವಿಂಗಡನೆ (Ward Delimitation) ಪೂರ್ಣಗೊಳ್ಳಬೇಕು ಮತ್ತು ಡಿಸೆಂಬರ್‌ 15ರೊಳಗೆ ವಾರ್ಡ್‌ವಾರು ಮೀಸಲಾತಿ ಅಧಿಸೂಚನೆ ಪ್ರಕಟವಾಗಬೇಕು ಎಂದು ನ್ಯಾಯಮೂರ್ತಿ ಸೂರ್ಯಕಾಂತ್‌ (JUSTICE SURYA KANT), ನ್ಯಾಯಮೂರ್ತಿ ಉಜ್ವಲ್‌ ಭುಯಾನ್‌ (JUSTICE UJJAL BHUYAN), ನ್ಯಾಯಮೂರ್ತಿ ಜಾಯ್‌ಮಲ್ಯ ಬಾಗ್ಚಿ (JUSTICE JOYMALYA BAGCHI )ಅವರಿದ್ದ ಮೂವರು ನ್ಯಾಯಮೂರ್ತಿಗಳ ಸುಪ್ರೀಂಕೋರ್ಟ್‌ (Supreme Court) ಪೀಠ ಆದೇಶಿಸಿದೆ.

ಮುಂದಿನ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಜನವರಿ 12, 2026ಕ್ಕೆ ಮುಂದೂಡಿದೆ.

ರಾಜ್ಯದಲ್ಲಿ ನಡೆಯುತ್ತಿರುವ ಜಾತಿ ಗಣತಿ ಹಿನ್ನೆಲೆಯಲ್ಲಿ ಕ್ಷೇತ್ರ ಪುನರ್‌ವಿಂಗಡನೆಗೆ 15 ದಿನಗಳ ಹೆಚ್ಚುವರಿ ಕಾಲಾವಕಾಶ ನೀಡುವಂತೆ ಸುಪ್ರೀಂಕೋರ್ಟ್‌ಗೆ (Supreme Court) ಕರ್ನಾಟಕ ಸರ್ಕಾರ (State Of Karnataka) ಮನವಿ ಮಾಡಿಕೊಂಡಿತ್ತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಚಪ್ಪಲಿ ವೀರ ರಾಜೀವ್‌ ಗೌಡನಿಗೆ ಜಾಮೀನು..!

ಶಿಡ್ಲಘಟ್ಟ ನಗರಸಭೆ ಆಯುಕ್ತೆಗೆ ಬೆದರಿಕೆಯೊಡ್ಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಕೇಸ್ ನಲ್ಲಿ...

ಬಿಗ್ ಬಾಸ್ ಸ್ಪಾನ್ಸರ್ – ಉದ್ಯಮಿ C.J.ರಾಯ್ ಆತ್ಮಹತ್ಯೆ

ಬೆಂಗಳೂರಿನ ಖ್ಯಾತ ಉದ್ಯಮಿ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿಜೆ ರಾಯ್ ಶುಕ್ರವಾರ...

BJPಯ ಅಶ್ವಥ್ ನಾರಾಯಣಗೆ 1 ವರ್ಷ ಜೈಲು- ಭೂಕಬಳಿಕೆ ಕೇಸ್ ನಲ್ಲಿ ಜೈಲು ಪಾಲಾದ BJP ಮಾಜಿ MLC..!

ಬಿಜೆಪಿ ಮಾಜಿ ಎಂಎಲ್ ಸಿ ಅಶ್ವಥ್ ನಾರಾಯಣಗೆ ಒಂದು ವರ್ಷ ಜೈಲು...

ಬೆಂಗಳೂರಲ್ಲಿ ಪವರ್ ಕಟ್- ಈ ಏರಿಯಾಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೂ ಕರೆಂಟ್ ಇರಲ್ಲ..!

ಬೆಂಗಳೂರಿನ 100ಕ್ಕೂ ಹೆಚ್ಚು ಬಡಾವಣೆಗಳಲ್ಲಿ ಜನವರಿ 21ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ....