BJP ಪರ ಅಡ್ಡ ಮತದಾನ: ಕಾಂಗ್ರೆಸ್‌ನಿಂದ ಐವರು ಶಾಸಕರು ಅಮಾನತು

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದ ಐವರು ಶಾಸಕರನ್ನು ಕಾಂಗ್ರೆಸ್‌ ಪಕ್ಷ ಅಮಾನತು ಮಾಡಿದೆ.

ಹರಿಯಾಣ ವಿಧಾನಸಭೆಯ ಐವರು ಶಾಸಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡಿ ಹರಿಯಾಣ ಕಾಂಗ್ರೆಸ್‌ ಅಧ್ಯಕ್ಷ ರಾವ್‌ ನರೇಂದರ್‌ ಸಿಂಗ್‌ ಆದೇಶ ಹೊರಡಿಸಿದ್ದಾರೆ.

ಅಮಾನತ್ತಾದ ಶಾಸಕರು:
ನರೈನ್‌ಘರ್‌ ಕ್ಷೇತ್ರದ ಶಾಸಕರಾದ ಶ್ಯಾಲಿ ಚೌಧರಿ, ಸದೌರಾ ಕ್ಷೇತ್ರದ ಶಾಸಕರಾದ ರೇಣು ಬಾಲಾ, ರಟಿಯಾ ಕ್ಷೇತ್ರದ ಶಾಸಕರಾದ ಜರ್ನೈಲ್‌ ಸಿಂಗ್‌, ಪುಹಾನಾ ಕ್ಷೇತ್ರದ ಶಾಸಕರಾದ ಮೊಹಮ್ಮದ್‌ ಇಲಿಯಾಸ್‌ ಮತ್ತು ಹಥಿನ್‌ ಕ್ಷೇತ್ರದ ಶಾಸಕರಾದ ಮೊಹಮ್ಮದ್‌ ಇಸ್ರೈಲ್‌.

ಹರಿಯಾಣ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿ ಕರ್ಮವೀರ್‌ ಸಿಂಗ್‌ ಬೌಧ್‌ ವಿರುದ್ಧ ಹಾಗೂ ಬಿಜೆಪಿ ಅಭ್ಯರ್ಥಿಯಾಗಿದ್ದಸತೀಶ್‌ ನಂದಲ್‌ ಪರ ತಮ್ಮ ಮತ ಚಲಾವಣೆ ಮಾಡಿದ್ದರು.

ತನ್ನದೇ ಪಕ್ಷದ ಐವರು ಶಾಸಕರ ಅಡ್ಡಮತದಾನದ ಹೊರತಾಗಿಯೂ ಕಾಂಗ್ರೆಸ್‌ನ ಕರ್ಮವೀರ್‌ ಸಿಂಗ್‌ ಗೆಲುವು ಸಾಧಿಸಿದ್ದರು.

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 48 ಮತ್ತು ಕಾಂಗ್ರೆಸ್‌ 37 ಶಾಸಕರನ್ನು ಹೊಂದಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

KAS ಅಧಿಕಾರಿ ಶೀತಲ್‌ T.S.ಗೆ ಕಂದಾಯ ಇಲಾಖೆಯಲ್ಲಿ ಆಗಿರುವ ಸಮಸ್ಯೆ ಏನು..?

ಕೆಎಎಸ್‌ ಅಧಿಕಾರಿ ಶೀತಲ್‌ ಟಿ.ಎಸ್‌.ಗೆ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಮಾಡಿರುವ...

ಪ್ರತಿಕ್ಷಣ Exclusive: ಲೆಕ್ಸಿಂಗ್‌ಟನ್‌ ಆಸ್ಪತ್ರೆ ವಿರುದ್ಧ ತನಿಖಾ ವರದಿ ಸಲ್ಲಿಕೆ, ಇನ್ನೂ ಬಂದಿಲ್ಲ ಎಂದ DHO ಕಚೇರಿ..! ಸುಳ್ಳು ಹೇಳ್ತಿರೋದು ಯಾರು..?

ಬೆಂಗಳೂರಿನ ರಾಜಾಜಿನಗರದಲ್ಲಿರುವ ಖಾಸಗಿ ಆಸ್ಪತ್ರೆ ಕೆಪಿಎಂಇ ನಿಯಮಗಳನ್ನು ಉಲ್ಲಂಘಿಸಿ ನಡೆಯುತ್ತಿದೆ ಎಂಬ...

ಪ್ರಧಾನಿ ಮೋದಿ ಸರ್ಕಾರಕ್ಕೆ ಲೋಕಸಭೆಯಲ್ಲೇ ಸೋಲು – ಮೀಸಲಾತಿ ಮಸೂದೆ ತಿರಸ್ಕಾರ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ...

ಬ್ರಿಟನ್‌ ಪೌರತ್ವ: ರಾಹುಲ್‌ ಗಾಂಧಿ ವಿರುದ್ಧ FIR ದಾಖಲಿಸಿ ತನಿಖೆಗೆ ಸೂಚನೆ

ಭಾರತದ ಪೌರತ್ವದ ಜೊತೆಗೆ ಬ್ರಿಟನ್‌ನ ಪೌರತ್ವವನ್ನು ಪಡೆದಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ...