ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ. ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದೆ. ಈ ಮೂಲಕ ವಿನಯ್ ಕುಲಕರ್ಣಿ ತನ್ನ ಜೀವಮಾನವಿಡೀ ಜೈಲಿನಲ್ಲೇ ಕಳೆಯಬೇಕಿದೆ.
ವಿನಯ್ ಕುಲಕರ್ಣಿ ಒಳಗೊಂಡು ೧೬ ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ.
ಆರೋಪಿ ಚನ್ನಕೇಶವ ಟಿಂಗರಿಕರ್ಗೆ ೭ ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.
ಯೋಗೀಶ್ ಗೌಡ ಮಕ್ಕಳಿಗೆ ೧೬ ಲಕ್ಷ ರೂಪಾಯಿ ಪರಿಹಾರ ನೀಡುವಂತೆಯೂ ನ್ಯಾಯಾಲಯ ಆದೇಶಿಸಿದೆ.


