ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಅಂಡರ್ವರ್ಲ್ಡ್ನ ಇನ್ನಿತರ ಕೇಸ್ಗೆ ಸಂಬಂಧಪಟ್ಟಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದ ಬೆನ್ನತ್ತಿರುವ ಜಾರಿ ನಿರ್ದೇಶನಾಲಯದ ಒಂದು ಭಾಗವಾಗಿ ಮಹಾರಾಷ್ಟ್ರ ಸಚಿವ, ಎನ್ಸಿಪಿ ನಾಯಕ ನವಾಬ್ ಮಲಿಕ್ರನ್ನೂ ವಿಚಾರಣೆಗೆ ಒಳಪಡಿಸಿತ್ತು. ಇದೀಗ ವಿಚಾರಣೆ ಮುಗಿದ ತಕ್ಷಣ ಇ.ಡಿ. ಅಧಿಕಾರಿಗಳು ನವಾಬ್ ಮಲ್ಲಿಕ್ರನ್ನು ಬಂಧಿಸಿದ್ದಾರೆ.
ಭೂಗತ ಪಾತಕಿ, ಭಯೋತ್ಪಾದಕ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡುತ್ತಿದ್ದ ದಾವೂದ್ ಇಬ್ರಾಹಿಂ, ಆತನ ಸಹೋದರ ಅನೀಸ್ ಇಕ್ಬಾಲ್, ಸಹಾಯಕ ಚೋಟಾ ಶಕೀಲ್ ಮತ್ತು ಇತರರ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಅಕ್ರಮ ಹಣ ವರ್ಗಾವಣೆ ಕೇಸ್ ದಾಖಲಿಸಿರುವ ಇ.ಡಿ., ಇದೇ ವಿಚಾರದಲ್ಲಿ ಅನೇಕ ರಾಜಕಾರಣ ಮೇಲೆ ಕಣ್ಗಾವಲು ಇಟ್ಟಿತ್ತು.
ದಾವೂದ್ ಇಬ್ರಾಹಿಂ ಹಲವು ರಾಜಕಾರಣಿಗಳೊಂದಿಗೆ ಆಸ್ತಿ, ಹಣಕಾಸು ವ್ಯವಹಾರ ನಡೆಸಿದ್ದಾನೆ ಎಂಬ ಶಂಕೆಯಡಿ ವಿಚಾರಣೆ ನಡೆಸುತ್ತಿದೆ. ಹಾಗೇ, ನವಾಬ್ ಮಲಿಕ್ರನ್ನು ಇಂದು ಬೆಳಗ್ಗೆ 8 ಗಂಟೆಯಿಂದ ಇ.ಡಿ.ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು.