ADVERTISEMENT
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮನನೊಂದ ಆಟೋ ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ತಾಲೂಕಿನ ಮಿಯಾರು ಕುಂಟಿಬೈಲು ನಿವಾಸಿಯಾಗಿರುವ 50 ವರ್ಷದ ಹರೀಶ್ ಶೆಟ್ಟಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಜುಲೈ 12ರಂದು ಬುಧವಾರ ಬಾವಿಗೆ ಹಾರಿ ಸಾವಿಗೆ ಶರಣಾಗಿದ್ದಾರೆ. ಇವರ ಮತ್ತು ಪತ್ನಿಯ ಜೊತೆಗಿನ ಸಂಬಂಧ ಹಳಸಿತ್ತು. ಪತ್ನಿ ತವರು ಮನೆ ಸೇರಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ತಾನು ಆತ್ಮಹತ್ಯೆ ಮಾಡಿಕೊಳ್ಳುವ ತನ್ನ ಸ್ನೇಹಿತರೊಂದಿಗೆ ಹರೀಶ್ ಶೆಟ್ಟಿ ಹೇಳಿಕೊಂಡಿದ್ದರು. ಆದರೆ ಪದೇ ಪದೇ ಈ ಮಾತುಗಳನ್ನಾಡುತ್ತಿದ್ದ ಕಾರಣ ಗೆಳೆಯರು ಇವರ ಮಾತನ್ನು ಗಂಭೀರವಾಗಿ ತೆಗೆದುಕೊಂಡಿರಲಿಲ್ಲ.
ಸಲಹೆ: ಆತ್ಮಹತ್ಯೆ ಪರಿಹಾರವಲ್ಲ. ತಜ್ಞರ ಸಲಹೆ ಪಡೆಯುವ ಮೂಲಕ ಮಾನಸಿಕ ಒತ್ತಡ ನಿವಾರಣೆ ನಿವಾರಿಸಬಹುದು. ಉಚಿತ ಸಹಾಯವಾಣಿ ಸಂಖ್ಯೆ: 9152987821
ADVERTISEMENT