ಚುನಾವಣಾ ಆಯೋಗವು 3 ಲೋಕಸಭಾ ಕ್ಷೇತ್ರ ಹಾಗೂ ಬೇರೆ ಬೇರೆ ರಾಜ್ಯಗಳ 7 ವಿಧಾನಸಭಾ ಕ್ಷೇತ್ರಗಳಿಗೆ ಇದೇ ಜೂನ್ 23 ಕ್ಕೆ ಉಪಚುನಾವಣೆ ನಡೆಯಲಿದೆ ಎಂದು ಘೋಷಣೆ ಮಾಡಿದೆ.
ಉತ್ತರ ಪ್ರದೇಶದ ಅಜಂಗಢದಲ್ಲಿ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಮತ್ತು ರಾಂಪುರದಲ್ಲಿ ಮೊಹಮ್ಮದ್ ಅಜಂ ಖಾನ್ ಅವರು ರಾಜೀನಾಮೆ ನೀಡಿದ್ದರಿಂದ ತೆರವಾದ ಲೋಕಸಭಾ ಸ್ಥಾನ ಮತ್ತು ಪಂಜಾಬ್ನಲ್ಲಿ ಭಗವಂತ ಮಾನ್ ಅವರು ಪ್ರತಿನಿಧಿಸುತ್ತಿದ್ದ ಸಂಗ್ರೂರ್ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.
ಈ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದವರು, ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಕಂಡಿದ್ದರಿಂದ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಉಳಿದಂತೆ ಜಾರ್ಖಂಡ್, ಆಂಧ್ರ ಪ್ರದೇಶ, ಅಗರ್ತಲಾ, ತ್ರಿಪುರಾಗಳಲ್ಲಿ ತೆರವಾಗಿರುವ ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಜೂನ್ 26ರಂದು ಮತ ಎಣಿಕೆ ನಡೆಯುತ್ತದೆ ಎಂದು ಭಾರತೀಯ ಚುನಾವಣಾ ಆಯೋಗ ಹೇಳಿದೆ.