ದೇಶದಲ್ಲಿ ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ಮೂಲವಸ್ತುಗಳ ಬೆಲೆ ದಿನೇ ದಿನೇ ಹೆಚ್ಚುತ್ತಲೇ ಇದೆ. ತೀವ್ರ ಬೆಲೆ ಹೆಚ್ಚಳದ ನಡುವೆ ಜನರ ಕೊಳ್ಳುವ ಶಕ್ತಿಯ ಮೇಲೆ ಪರಿಣಾಮ ಬೀರುತ್ತಿದೆ. ಈ ಮಧ್ಯೆ ಬೆಲೆ ಏರಿಕೆಯನ್ನು ಖಂಡಿಸಿರುವ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ಇದು ‘ದೇಶ ವಿರೋಧಿ ಕೆಲಸ’ ಎಂದು ಕೇಂದ್ರದ ತಮ್ಮದೇ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿರುವ ಅವರು, ಪೆಟ್ರೋಲ್ ಡೀಸೆಲ್ ಮತ್ತು ಸೀಮೆಎಣ್ಣೆ ಬೆಲೆ ದಿನೇ ದಿನೇ ಏರಿಕೆಯಾಗುತ್ತಿರುವುದು ದೇಶದಲ್ಲಿ ದಂಗೆಯ ಪರಿಸ್ಥಿತಿಯನ್ನು ಸೃಷ್ಟಿಸುತ್ತಿದೆ. ಬೆಲೆ ಹೆಚ್ಚಳ ಮಾಡುವುದು ಹಣಕಾಸು ಸಚಿವಾಲಯದ ಬೌದ್ಧಿಕ ದಿವಾಳಿತನವಾಗಿದೆ. ಇದು ರಾಷ್ಟ್ರವಿರೋಧಿಯೂ ಹೌದು. ಈ ಬೆಲೆಗಳನ್ನು ಹೆಚ್ಚಿಸುವ ಮೂಲಕ ಕೊರತೆಯ ಹಣಕಾಸು ಬಜೆಟ್, ಸಂಪೂರ್ಣ ಅಸಮರ್ಥವಾಗಿದೆ ಎಂದು ಹೇಳಿದ್ದಾರೆ.
The daily rise in Petrol Diesel and Kerosene prices is creating a situation of revolt in the country. It is the intellectual bankruptcy of the Finance Ministry to do this. It is also anti national . Financing Budget deficit by raising these prices is sheer incompetence
— Subramanian Swamy (@Swamy39) April 5, 2022
ಅಂತರಾಷ್ಟ್ರೀಯ ಇಂಧನ ಬೆಲೆಗಳಿಂದಾಗಿ ಎಲ್ಲಾ ದೇಶಗಳಲ್ಲಿ ಬೆಲೆ ಏರಿಕೆಯಾಗಿದೆ. ಇಂಧನ ಬೆಲೆಗಳನ್ನು ಕಡಿಮೆ ಮಾಡಲು ನಿಮ್ಮ ಬಳಿ ಏನಾದರೂ ಮ್ಯಾಜಿಕ್ ಪರಿಹಾರವಿದೆಯೇ? ಎಂಬ ಟ್ವೀಟಿಗನಿಗೆ ಉತ್ತರಿಸಿರುವ ಸುಬ್ರಮಣಿಯನ್ ಸ್ವಾಮಿ, ತೆರಿಗೆ ಕಡಿತ ಮಾಡಲಿ. ಯಾವುದೇ ದೇಶವು ಶೇ.60 ರಷ್ಟು ತೆರಿಗೆ ವಿಧಿಸುವುದಿಲ್ಲ ಎಂದಿದ್ದಾರೆ.
https://youtu.be/GyJ7NOVy2Po