ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಅವರನ್ನು ಪದಚ್ಯುತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಹೀಂ ಉಚ್ಚಿಲ ಅವರನ್ನು ಕರ್ನಾಟಕ ಬ್ಯಾರಿ ಅಕಾಡೆಮಿಯ ಅಧ್ಯಕ್ಷರ ಸ್ಥಾನದಿಂದ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ ಆರ್ ರಮೇಶ್ ಆದೇಶ ಹೊರಡಿಸಿದ್ದಾರೆ.
ಪದಚ್ಯುತಿಗೆ ಸ್ಪಷ್ಟ ಕಾರಣ ಏನೆಂಬುದನ್ನು ಆದೇಶದಲ್ಲಿ ತಿಳಿಸಿಲ್ಲ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ರಹೀಂ ಉಚ್ಚಿಲ ಅವರು, ನನ್ನ ಪದಚ್ಯುತಿಗೆ ಸ್ಪಷ್ಟ ಕಾರಣ ಗೊತ್ತಾಗಿಲ್ಲ. ಆದೇಶ ಬಂದ ನಂತರ ನನಗೆ ವಿಷಯ ತಿಳಿಯಿತು ಎಂದು ಹೇಳಿದ್ದಾರೆ.