ಮಳೆ ಅನಾಹುತ ಮತ್ತು ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ 8 ವಲಯಗಳಿಗೆ ಬೆಂಗಳೂರಿನ ಸಚಿವರ ನೇತೃತ್ವದಲ್ಲಿ ಕಾರ್ಯಪಡೆಗಳನ್ನು ರಚಿಸಲಾಗಿದೆ.
ದಾವೋಸ್ ಪ್ರವಾಸಕ್ಕೂ ಮೊದಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನ ಎಂಟು ವಲಯಗಳ ಜವಾಬ್ದಾರಿಯನ್ನು ಸಚಿವರಿಗೆ ಹಂಚಿಕೆ ಮಾಡಿದ್ದಾರೆ.
ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆ ಬಳಿಕ ಈ ಕಾರ್ಯಪಡೆ ರಚಿಸಲಾಗಿದೆ. ಇದರಲ್ಲಿ ಸಂಬಂಧಪಟ್ಟ ವಲಯಗಳ ಶಾಸಕರು, ಸಂಸದರು ಮತ್ತು ಬಿಬಿಎಂಪಿ ಅಧಿಕಾರಿಗಳು ಸದಸ್ಯರಾಗಿರುತ್ತಾರೆ. ವಲಯಗಳ ಜಂಟಿ ಆಯುಕ್ತರು ಈ ಕಾರ್ಯಪಡೆಯ ಸಂಚಾಲಕರಾಗಿ ಕಾರ್ಯ ನಿರ್ವಹಿಸುತ್ತಾರೆ. ಕಾರ್ಯಪಡೆ ನೇತೃತ್ವದ ವಿವರ ಇಂತಿದೆ.
-ಆರ್ ಅಶೋಕ್- ದಕ್ಷಿಣ ವಲಯ
-ಡಾ.ಅಶ್ವಥ್ ನಾರಾಯಣ್- ಪೂರ್ವ ವಲಯ
-ವಿ ಸೋಮಣ್ಣ- ಪಶ್ಚಿಮ ವಲಯ
-ಎಸ್ ಟಿ ಸೋಮಶೇಖರ್ -ಆರ್ ಆರ್ ನಗರ ವಲಯ
-ಬೈರತಿ ಬಸವರಾಜ್- ಮಹದೇವಪುರ ವಲಯ
-ಗೋಪಾಲಯ್ಯ -ಬೊಮ್ಮನಹಳ್ಳಿ ವಲಯ
-ಮುನಿರತ್ನ -ಯಲಹಂಕ ಮತ್ತು ದಾಸರಹಳ್ಳಿ ವಲಯ