ರಾಜ್ಯ ಸರ್ಕಾರದ ಮುಂದಿನ ಮುಖ್ಯ ಕಾರ್ಯದರ್ಶಿಯನ್ನಾಗಿ 1986 ನೇ ಬ್ಯಾಚ್ನ ಐಎಎಸ್ ಅಧಿಕಾರಿ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಪ್ರಸ್ತುತ ಮುಖ್ಯ ಕಾಯದರ್ಶಿಯಾಗಿರುವ ಪಿ.ರಾಜೀವ್ ಕುಮಾರ್ ಅವರ ಅಧಿಕಾರಾವಧಿ ಇದೇ ಮೇ 31 ರಂದು ಮುಕ್ತಾಯಗೊಳ್ಳಲಿದೆ.
ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ವಂದಿತಾ ಶರ್ಮಾ ಅವರನ್ನು ಮುಖ್ಯ ಕಾಯದರ್ಶಿಯನ್ನಾಗಿ ಬಡ್ತಿ ನೀಡಲಾಗಿದೆ. ಇವರು ಇದೇ ಜೂನ್ 1 ರಂದು ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
2023 ರ ನವೆಂಬರ್ ನಲ್ಲಿ ಇವರ ಅಧಿಕಾರಾವಧಿ ಮುಕ್ತಾಯಗೊಳ್ಳಲಿದೆ.