ADVERTISEMENT
ಜಮೀರ್ ಅಹ್ಮದ್ ಖಾನ್ ನಮ್ಮ ಪಕ್ಷದ ಬಾಹುಬಲಿ. ಜಾಫರ್ ಷರೀಫ್ ಬಳಿಕ ಮುಸ್ಲಿಂ ನಾಯಕರಾಲು ಜಮೀರ್ಗೆ ಅವಕಾಶ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ನಮ್ಮ ಪಕ್ಷದ ಉನ್ನತ ನಾಯಕ ಜಮೀರ್ ಅಹ್ಮದ್ಖಾನ್. ಅವರನ್ನು ನೀವು ಎಲ್ಲ ರೀತಿಯಿಂದ ಬೆಳಸಬೇಕು. ಅವರು ನಮ್ಮ ಪಕ್ಷದ ಬಾಹುಬಲಿ. ತಮ್ಮದೇ ಆದ ಶಕ್ತಿಯನ್ನು ಹೊಂದಿದ್ದಾರೆ
ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ಈ ಮೂಲಕ ಮುಂದಿನ ಸಿಎಂ ಸಿದ್ದರಾಮಯ್ಯನವರೇ ಆಗಬೇಕು ಎಂದು ಹೇಳಿಕೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಕೆಂಗಣ್ಣಿಗೆ ಗುರಿಯಾಗಿ ಜಮೀರ್-ಗಿಮೀರ್ ಎಂದು ಡಿಕೆಶಿಯಿಂದ ಕುಚೋದ್ಯಕ್ಕೆ ಒಳಗಾಗಿದ್ದ ಜಮೀರ್ ಬಗ್ಗೆ ಜಾರಕಿಹೊಳಿ ಆಡಿರುವ ಮಾತು ಮಹತ್ವದ ಪಡೆದಿದೆ.
ಬೆಳಗಾವಿ ನಗರದಲ್ಲಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಲ್ಪಸಂಖ್ಯಾತ ನಾಯಕರ ಚಿಂತನಾ ಸಭೆಯಲ್ಲಿ ಮಾತನಾಡಿದ ಜಾರಕಿಹೊಳಿ
ಆಗಸ್ಟ್ 3ರಂದು ಸಿದ್ದರಾಮಯ್ಯನವರ ಹುಟ್ಟುಹಬ್ಬ ದಾವಣಗೆರೆಯಲ್ಲಿ ಮಾಡ್ತಿದ್ದೇವೆ. ಹಿಂದಿನ ಮುಖ್ಯಮಂತ್ರಿ ನಮ್ಮ ನಾಯಕ ಸಿದ್ದರಾಮಯ್ಯ ನವರ ಹುಟ್ಟು ಹಬ್ಬ ಆಚರಣೆ ಮಾಡ್ತಿದ್ದೇವೆ. ಬೆಂಗಳೂರಿನಿಂದ ನಮಗೆ ಆಹ್ವಾನ ನೀಡಲು ಜಮೀರ್ ಬಂದಿದ್ದಾರೆ.
ಒಂಬತ್ತು ತಿಂಗಳಲ್ಲಿ ಚುನಾವಣೆ ಬರ್ತಾ ಇದೆ.ಈ ಚುನಾವಣೆಯಲ್ಲಿ ನೀವೆಲ್ಲಾ ಒಗ್ಗಟ್ಟಾಗಬೇಕು. ಬರುವ ಚುನಾವಣೆಯಲ್ಲಿ ಗಟ್ಟಿಯಾಗಿರಬೇಕು.
ಜಾಫರ್ ಶರೀಫ್ ನಂತರ ಮತ್ತೊಬ್ಬ ಮುಸ್ಲಿಂ ನಾಯಕರಾಗಲು ಜಮೀರ್ಗೆ ಅವಕಾಶವಿದೆ. ಎಲ್ಲೇ ಹೋದರೂ ಜಮೀರ್ ಜೇಬಿನಲ್ಲಿ ಐದರಿಂದ ಹತ್ತು ಲಕ್ಷ ರೂಪಾಯಿ ಇರುತ್ತದೆ.
ನಮ್ಮ ಬಳಿ ಅಷ್ಟು ಹಣ ಇಟ್ಟುಕೊಳ್ಳುವುದಿಲ್ಲ. ವಾಪಸ್ ಹೋಗುವಾಗ ಖಾಲಿ ಜೇಬಿನಿಂದ ಹೋಗ್ತಾರೆ. ಇಡಿ, ಐಟಿ ನಿಮ್ಮ ಹಿಂದೆ ಬಿದ್ದಿದೆ. ಆದರೆ ನಿಮ್ಮ ಜತೆಗೆ ಪಕ್ಷ ಮತ್ತು ಸಮುದಾಯವಿದೆ. ಮುಂದಿನ ದಿನಗಳಲ್ಲಿ ಅಚ್ಚೆದಿನ್ ಬರುತ್ತದೆ.ನೀವು ಕಾಯಬೇಕು
ನಿಮ್ಮ ಶಕ್ತಿ ಕಾಂಗ್ರೆಸ್ ಶಕ್ತಿ. ಎಲ್ಲರೂ ಒಗ್ಗಟ್ಟಾಗಿರಬೇಕು. ಮುಂದಿನ ದಿನಗಳಲ್ಲಿ ಜಮೀರ್ ಅಹ್ಮದ್ ಬೆಳಗಾವಿಗೆ ಆಗಮಿಸುತ್ತಾರೆ. ನಿಮಗೂ ಒಬ್ರೂ ಲೀಡರ್ ಅಂತಾ ಬೇಕಾಗುತ್ತದೆ. ಹೀಗಾಗಿ ಜಮೀರ್ ಬರ್ತಾರೆ. ಎಲ್ಲ ಕಡೆ ಸಭೆಗಳನ್ನ ಮಾಡ್ತಾರೆ. ಅಲ್ಪಸಂಖ್ಯಾತ ಸಮುದಾಯದಿಂದ ಜಮೀರ್ ಅಹ್ಮದ್ ನಾವು ಕೂಡ ಮುಖ್ಯಮಂತ್ರಿ ಆಕಾಂಕ್ಷಿ ಅಂದಿದ್ದಾರೆ. ನಮಗೂ ಸಾಕಷ್ಟು ಜನ ಕೇಳ್ತಾರೆ.
ಆದ್ರೆ, “ನಮ್ಮ ಸರದಿ ಇನ್ನೂ ದೂರ ಇದೆ. ದಿಲ್ಲಿ ಅಬಿ ದೂರ್ ಹೈ”ನಮ್ಮದು ಸಿಎಂ ಕುರ್ಚಿಗಾಗಿ ಲಡಾಯಿ ಇಲ್ಲ. ಈಗ ನಮ್ಮ ಜನರಿಗೆ ಸಮಾನತೆ ಬೇಕಾಗಿದೆ.ಆ ನಿಟ್ಟಿನಲ್ಲಿ ನಮ್ಮ ಹೋರಾಟ ಇದೆ. ಈಗ ನಮ್ಮದು ಕುರ್ಚಿಗಾಗಿ ಪೈಟ್ ಇಲ್ಲ ಸಮಾನತೆಗಾಗಿ ಎಂದ ಸತೀಶ ಜಾರಕಿಹೊಳಿ ಜಮೀರ್ ಅಹ್ಮದ್ರನ್ನು ಕೊಂಡಾಡಿದರು.
ADVERTISEMENT