ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು ಹಿನ್ನಡೆ ಅನುಭವಿಸಿದೆ. ಆ ಹಿನ್ನೆಲೆಯಲ್ಲಿ ಜನರ ತೀರ್ಪನ್ನು ಒಪ್ಪಿಕೊಂಡಿರುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ. ಜನಾದೇಶದಲ್ಲಿ ಜಯಗಳಿಸಿದವರಿಗೆ ಶುಭಾಶಯಗಳು. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಶ್ರಮ ಹಾಗೂ ಸಮರ್ಪಣೆಗಾಗಿ ನನ್ನ ಕೃತಜ್ಞತೆಗಳು ಎಂದು ರಾಹುಲ್ ಟ್ವೀಟಿಸಿದ್ದಾರೆ.
ಇದರಿಂದ ನಾವು ಕಲಿಯುತ್ತೇವೆ ಹಾಗೂ ಭಾರತದ ಜನರ ಹಿತಾಸಕ್ತಿಗಳಿಗಾಗಿ ಕೆಲಸ ಮಾಡುತ್ತಲೇ ಇರುತ್ತೇವೆ ಎಂದು ರಾಹುಲ್ ತಮ್ಮ ಟ್ವೀಟ್ನಲ್ಲಿ ಹೇಳಿದ್ದಾರೆ.
Humbly accept the people’s verdict. Best wishes to those who have won the mandate.
My gratitude to all Congress workers and volunteers for their hard work and dedication.
We will learn from this and keep working for the interests of the people of India.
— Rahul Gandhi (@RahulGandhi) March 10, 2022
ಕಾಂಗ್ರೆಸ್ ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರು ಕಾಂಗ್ರೆಸ್ ವರ್ಕಿಂಗ್ ಕಮಿಟಿಯ ಸಭೆ ಕರೆದಿದ್ದಾರೆ.