ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ ಯುವ ರೈತ ಸಾಲ ಭಾದೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.
ಶ್ರೀನಿವಾಸ ರೆಡ್ಡಿ ಮಾಸ್ತಿ ಎನ್ನುವ ಯುವ ರೈತನೇ ಸಾಲಭಾದೆ ತಾಳಲಾರದೆ ಅತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶ್ರೀನಿವಾಸ ರೆಡ್ಡಿ ಮಾಸ್ತಿ ಎನ್ನುವ ಯುವ ರೈತ ಬಸುಮಾರು 14 ಲಕ್ಷ ಬೆಳೆ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಈ ಸಾಲ ತೀರಿಸಲಾಗದೆ ಮನೆಯಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಘಟನೆಗೆ ಸಂಬಂಧಿಸಿದಂತೆ ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.